
ಕರ್ನಾಟಕ
ಕೆಎಸ್ಆರ್ಟಿಸಿ ವೋಲ್ವೋ, ದುರ್ಗಾಂಬ ಬಸ್ ಡಿಕ್ಕಿ: ಇಬ್ಬರ ಸಾವು
ಹಾಸನ,ಡಿ.05: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಎಸ್ಆರ್ಟಿಸಿ ವೋಲ್ವೋ ಬಸ್ ಮತ್ತು ದುರ್ಗಾಂಬಾ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಲೂರು ತಾಲೂಕಿನ ಹೆದ್ದುರ್ಗ ಬಳಿ ಸಂಭವಿಸಿದೆ.
ಮೃತರನ್ನು ಫಾತೀಮಾ(28), ವರ್ಷದ ಅಬ್ದುಲ್ ಸಲಾಂ(54 ) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಸ್ಥಳಕ್ಕೆ ಆಲೂರು, ಸಕಲೇಶಪುರ ಪೊಲೀಸರು ಭೇಟಿ ನೀಡಿದ್ದು, ಸಂಚಾರ ಸುಗಮಗೊಳಿಸಲು ಹರಸಾಹಸ ಪಡುತ್ತಿದ್ದಾರೆ. ( ವರದಿ : ಪಿ.ಎಸ್ )