
ಮೈಸೂರು
ಯೋಜನಾ ವೇದಿಕೆ ಉದ್ಘಾಟನೆ
ಮೈಸೂರಿನ ಮಾನಸಗಂಗೋತ್ರಿಯ ಇಎಂಎಂಆರ್ ಸಿ ಸಭಾಂಗಣದಲ್ಲಿ ಯೋಜನಾ ವೇದಿಕೆ ಮತ್ತು , ಕೌಟಿಲ್ಯ ಆರ್ಥಿಕ ಆಲೋಚನೆಗಳ ವೇದಿಕೆಯನ್ನು ಶುಕ್ರವಾರ ಉದ್ಘಾಟಿಸಲಾಯಿತು.
ಮೈಸೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಮತ್ತು ಸಹಕಾರ ಅಧ್ಯಯನ ವಿಭಾಗದ ವತಿಯಿಂದ ನಡೆದ ಕಾರ್ಯಕ್ರಮವನ್ನು ಬೆಂಗಳೂರು ಇನ್ಸಟಿಟ್ಯೂಟ್ ಫಾರ್ ಸೋಷಿಯಲ್ ಆ್ಯಂಡ್ ಎಕನಾಮಿಕ್ ಚೇಂಜ್ ಮಾಜಿ ನಿರ್ದೇಶಕ ಪ್ರೊ.ಆರ್.ಎಸ್.ದೇಶಪಾಂಡೆ ಉದ್ಘಾಟಿಸಿದರು. ವಿಭಾಗದ ಮುಖ್ಯಸ್ಥೆ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಎಸ್.ಇಂದುಮತಿ ಕರ್ನಾಟಕ ಎಕಾನಮಿ ಕುರಿತು ಉಪನ್ಯಾಸ ನೀಡಿದರು.
ಈ ಸಂದರ್ಭಉಪನ್ಯಾಸಕರುಗಳು ಉಪಸ್ಥಿತರಿದ್ದರು.