
ಕರ್ನಾಟಕ
ಜೀವನದಲ್ಲಿ ಜಿಗುಪ್ಸೆ : ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
ರಾಜ್ಯ(ಮಡಿಕೇರಿ)ಆ.25:- ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವರು ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರಪೇಟೆ ಸಮೀಪದ ಯಡವಾರೆ ಗ್ರಾಮದಲ್ಲಿ ಸಂಭವಿಸಿದೆ.
ಯಡವಾರೆ ಗ್ರಾಮ ಸಜ್ಜಳ್ಳಿ ನಿವಾಸಿ ನಾಗವೇಣಿ ಎಂಬವರ ಪತಿ ಕಲ್ಲಗದ್ದೆ ಕೆ. ಬಾಲಕೃಷ್ಣ (70) ಎಂಬವರೇ ಆತ್ಮಹತ್ಯೆಗೆ ಶರಣಾದವರಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕುತ್ತಿಗೆ ಭಾಗಕ್ಕೆ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. (ಕೆಸಿಐ,ಎಸ್.ಎಚ್)