ಸುದ್ದಿ ಸಂಕ್ಷಿಪ್ತ
ವಾರ್ಷಿಕ ದಿನಾಚರಣೆ
ಜಿಲ್ಲಾ ಕಮಾಂಡೆಂಟ್ ಹೋಂಗಾರ್ಡ್ಸ್ ವತಿಯಿಂದ ಅಖಿಲ ಭಾರತ ಗೃಹರಕ್ಷಕ ದಳದ ವಾಋ್ಷಿಕ ದಿನಾಚರಣೆ ಡಿ.25ರಂದು ಸರಸ್ವತಿಪುರಂನಲ್ಲಿರುವ ಅಗ್ನಿಶಾಮಕ ಠಾಣಾ ಕವಾಯತು ಮೈದಾನದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಿ. ಕೃಷ್ಣಯ್ಯ ಮತ್ತು ಅತಿಥಿಗಳಾಗಿ ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕಿ ಕೆ.ಸಿ.ದಿವ್ಯಶ್ರೀ, ಪ್ರಾದೇಶಿಕ ಅಗ್ನಿಶಾಮಕಾಧಿಕಾರಿ ಜಿ.ಈಶ್ವರ ನಾಯಕ್ ಅವರು ಭಾಗವಹಿಸಲಿದ್ದಾರೆ.