
ಪ್ರಮುಖ ಸುದ್ದಿ
ವಿವಿಧ ಸರ್ಕಾರಿ ಸೌಲಭ್ಯ ಗಳಿಗಾಗಿ ಅಂಗನವಾಡಿ ಕಾರ್ಯಕರ್ತೆಯರ ಧರಣಿ
ರಾಜ್ಯ(ಚಾಮರಾಜನಗರ)ಅ.22:- ಕೊಳ್ಳೇಗಾಲ ಪಟ್ಟಣದ ತಾಲೂಕು ಕಛೇರಿ ಅವರಣದಲ್ಲಿಂದು ಅಂಗನವಾಡಿ ಕಾರ್ಯಕರ್ತೆಯರು ಪಿಂಚಣಿ ಸೌಲಭ್ಯಕಾಗಿ ಹಾಗೂ ವಿವಿಧ ಸರ್ಕಾರಿ ಸೌಲಭ್ಯ ಗಳಿಗಾಗಿ ಧರಣಿ ನಡೆಸಿದರು.
ಈ ವಿಷಯವಾಗಿ ಮಾತನಾಡಿದ ಕಾರ್ಮಿಕ ಸಂಘಟನೆಯ ಕಾರ್ಯಕರ್ತೆಯರು ಸರ್ಕಾರಕ್ಕೆ ನಮ್ಮ ಮನವಿ ಸಲ್ಲಿಸಲಾಗಿದೆ. ಸರ್ಕಾರ ಈ ಕೂಡಲೇ ಅಂಗನವಾಡಿ ಕಾರ್ಯ ಕರ್ತೆಯರಿಗೆ ಸರ್ಕಾರಿ ನೌಕರರಿಗೆ ನೀಡುವ ಸೌಲಭ್ಯ ಗಳನ್ನೂ ನಮಗೂ ನೀಡಿ ಈ ಮಲತಾಯಿ ಧೋರಣೆಯನ್ನು ನಿಲ್ಲಿಸುವಂತೆ ಪ್ರತಿಭಟನೆ ನಡೆಸಿದ್ದೇವೆ ಎಂದರು. (ಕೆ.ಎಸ್,ಎಸ್.ಎಚ್)