
ಕರ್ನಾಟಕ
ಅ.27ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಹಾಸನ (ಅ.27): ಹಾಸನ ವಿ.ವಿ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸ ಹಾಗೂ 3ನೇ ತ್ರೈಮಾಸಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವ ಪ್ರಯುಕ್ತ ವಿಜಯನಗರ ಬಡಾವಣೆ, ಸಂತೆಪೇಟೆ, ಬೈಲಹಳ್ಳಿ, ಕೆ.ಹೆಚ್.ಬಿ, ಚನ್ನಪಟ್ಟಣ, ಹನುಮಂತಪುರ, ಮೆಡಿಕಲ್ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶ, ಹಾಸನಾಂಬ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶ ಹಾಗೂ ಹಾಸನ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಪ್ರದೇಶಗಳಲ್ಲಿ ಅ. 27 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ, ಆದುದರಿಂದ ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಕವಿಪ್ರನಿನಿ, ಕಾರ್ಯಪಾಲಕ ಇಂಜಿನಿಯರ್ ಅವರು ಕೋರಿದ್ದಾರೆ. (ಎನ್.ಬಿ)