
ಕರ್ನಾಟಕಪ್ರಮುಖ ಸುದ್ದಿ
ಮೋದಿಗೆ ಅಭಿನಂದನೆ, ರಾಜ್ಯ ಕಾಂಗ್ರೆಸ್ ನಾಯಕರ ಬಗ್ಗೆ ದೇವೇಗೌಡರ ಬೇಸರ
ಬೆಂಗಳೂರು (ಮೇ 23): ಲೋಕಸಭಾ ಚುನಾವಣೆಯಲ್ಲಿ ಅನಿರೀಕ್ಷಿತ ಸೋಲು ಕಂಡಿರುವ ಸಮ್ಮಿಶ್ರ ಸರ್ಕಾರ ತೀವ್ರ ಕಂಗೆಟ್ಟಿದೆ. ರಾಜ್ಯದಲ್ಲಿ 12-13 ಸ್ಥಾನ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದ ಕಾಂಗ್ರೆಸ್ಗೆ ಬರಸಿಡಿಲು ಬಡಿದಂತಾಗಿದೆ. ಬಿಜೆಪಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆದ್ದು ಮೇಲುಗೈ ಸಾಧಿಸಿದೆ. ಇನ್ನೂ ಜೆಡಿಎಸ್ ನಾಯಕರು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದಕ್ಕೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈತ್ರಿ ಮಾಡಿಕೊಂಡು ಮಂಡ್ಯ ಹಾಗೂ ತುಮಕೂರಿನಲ್ಲಿ ಹೀನಾಯ ಸೋಲು ಅನುಭವಿಸುವಂತಾಯಿತು ಎಂದು ಪಶ್ಚಾತ್ತಾಪ ಪಡುತ್ತಿದ್ಧಾರೆ. ತಮ್ಮ ಮಗ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಳಿ ತಮ್ಮ ಸಂಕಟವನ್ನು ಹೇಳಿಕೊಂಡಿದ್ದಾರೆ. ಇವರ ಸಹವಾಸ ಬೇಕಿತ್ತಾ ನಮಗೆ. ಇವರ ಸಹವಾಸದಿಂದ ನಮಗೆ ಈ ಗತಿ ಬಂತಲ್ಲ. ಅವರು ನಮ್ಮನ್ನು ಸಂಪೂರ್ಣವಾಗಿ ಮುಳುಗಿಸಿದರಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಫಲಿತಾಂಶದ ಬಗ್ಗೆ ಚರ್ಚಿಸುವಾಗ ದೇವೇಗೌಡರು ತಮ್ಮ ಮನದ ನೋವನ್ನು ಎಚ್ಡಿಕೆ ಬಳಿ ಹೇಳಿಕೊಂಡಿದ್ಧಾರೆ. ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ವಿರುದ್ಧ 12,887 ಮತಗಳ ಅಂತರದಿಂದ ಹೀನಾಯ ಸೋಲು ಕಂಡಿದ್ದಾರೆ. ಮಂಡ್ಯದಲ್ಲಿ ತಮ್ಮ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ಭಾರೀ ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ. ಮೈತ್ರಿ ಅಭ್ಯರ್ಥಿ ನಿಖಿಲ್ 5,75,740 ಮತಗಳನ್ನು ಪಡೆದರೆ, ಸ್ವತಂತ್ರ ಅಭ್ಯರ್ಥಿ ಸುಮಲತಾ ಬರೋಬ್ಬರಿ 7,01,122 ಮತಗಳನ್ನು ಪಡೆದು ಜಯಭೇರಿ ಬಾರಿಸಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಯದ ಅಭಿನಂದನೆ ಸಲ್ಲಿಸಿದ್ದಾರೆ.
I thank the voters, leaders, party workers of both @JanataDal_S & @INCIndia and everyone who supported me.Our work towards betterment of the society will never stop.
Congratulations to all the elected MPs.
Congratulations to @narendramodi on the big victory.
H D Devegowda (@H_D_Devegowda) May 23, 2019
ಚುನಾವಣೆಯಲ್ಲಿ ಸಹಕರಿಸಿದ ಮುಖಂಡರಿಗೆ, ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದ ಹೇಳಿದ್ದಾರೆ. ಚುನಾಯಿತ ಹೊಸ ಸಂಸದರಿಗೆ ಅಭಿನಂದನೆ ತಿಳಿಸಿದ್ದಾರೆ. ಸಮಾಜದ ಒಳಿತಿಗಾಗಿ ನಮ್ಮ ಕೆಲಸ ನಿಲ್ಲುವುದಿಲ್ಲ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. (ಎನ್.ಬಿ)