
ಮೈಸೂರು
ರಾಜ್ಯ ಯುವ ಮೋರ್ಚಾ ನೂತನ ಅಧ್ಯಕ್ಷರಾದ ಡಾ.ಸಂದೀಪ್ ಕುಮಾರ್ ಗೆ ಸನ್ಮಾನ
ಮೈಸೂರು,ಆ.12:- ಮೈಸೂರು ನಗರ ಬಿಜೆಪಿ ಕಛೇರಿಯಲ್ಲಿ ನಿನ್ನೆ ನಡೆದ ಮೈಸೂರು ನಗರ ಮತ್ತು ಚಾಮರಾಜನಗರ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳ ಸಭೆಗೆ ಆಗಮಿಸಿದ್ದ ರಾಜ್ಯ ಯುವ ಮೋರ್ಚಾ ನೂತನ ಅಧ್ಯಕ್ಷರಾದ ಡಾ.ಸಂದೀಪ್ ಕುಮಾರ್ ಅವರನ್ನು ನಗರ ಯುವ ಮೋರ್ಚಾವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ನಗರಾಧ್ಯಕ್ಷರಾದ ಟಿ ಎಸ್ ಶ್ರೀವತ್ಸ ಮತ್ತು ರಾಜ್ಯ ಉಪಾಧ್ಯಕ್ಷರಾದ ರಾಜೇಂದ್ರ. ನಗರ ಯುವ ಮೋರ್ಚಾ ಅಧ್ಯಕ್ಷರಾದ ಕಿರಣ್ ಗೌಡ ಮತ್ತು ಚಾಮರಾಜನಗರ ಮೋರ್ಚಾ ಅಧ್ಯಕ್ಷರಾದ ಪ್ರಣಯ್. ಮೈಸೂರು ಗ್ರಾಮಾಂತರ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ವಿಜಯ್ ಕುಮಾರ್. ನಗರ ಪ್ರಧಾನ ಕಾರ್ಯದರ್ಶಿಗಳಾದ ವಾಣೀಶ್. ಗಿರಿಧರ್. ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಭರತ್. ಸಂತೋಷ್ ಕುಮಾರ್. ದೇವರಾಜ್. ಧೀರಜ್.ಗೋಕುಲ್ ಗೋವರ್ಧನ್. ನಗರ ಉಪಾಧ್ಯಕ್ಷರು ಕಾರ್ಯದರ್ಶಿಗಳು ಕಾರ್ಯಕಾರಿಣಿ ಸಮಿತಿಯ ಸದಸ್ಯರು ಮತ್ತು ಮಾಧ್ಯಮ ಸಹ ಸಂಚಾಲಕ ಪ್ರದೀಪ್ ಕುಮಾರ್ ಮತ್ತಿತರರಿದ್ದರು. (ಕೆ.ಎಸ್,ಎಸ್.ಎಚ್)