
ಕರ್ನಾಟಕಪ್ರಮುಖ ಸುದ್ದಿ
ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ರಾಜೀನಾಮೆ ಪಡೆದುಕೊಳ್ಳಲಿ: ಸಿದ್ದರಾಮಯ್ಯ
ಬೆಂಗಳೂರು,ಮಾ.3- ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ಈ ಕೂಡಲೇ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಜನಧ್ವನಿ ಜಾಥಾಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ರಮೇಶ್ ಜಾರಕಿಹೊಳಿ ಸಿಡಿ ವಿಚಾರದ ಕುರಿತು ಮಾತನಾಡಿದ ಅವರು, ಈ ಕಾಮಕಾಂಡ ಇಡೀ ರಾಷ್ಟ್ರಕ್ಕೆ ಗೊತ್ತಾಗಿದೆ. ಮಾನ-ಮರ್ಯಾದೆ ಇರೋ ಸರ್ಕಾರ ಕೂಡಲೇ ರಾಜೀನಾಮೆ ತೆಗೆದುಕೊಂಡು ಎಫ್ಐಆರ್ ದಾಖಲಿಸಬೇಕು. ಮನುಷ್ಯನ ಮೌಲ್ಯಗಳಿಗೆ ಬೆಲೆ ಕೊಡುವುದಾದರೆ ಕೂಡಲೇ ರಾಜೀನಾಮೆ ತೆಗೆದುಕೊಳ್ಳಬೇಕೆಂದರು.
ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಜನ ವಿರೋಧಿ ನೀತಿಗಳ ಬಗ್ಗೆ ಜನಾಭಿಪ್ರಾಯ ರೂಪಿಸಲು ಪ್ರದೇಶ ಕಾಂಗ್ರೆಸ್ ಸಮಿತಿ ಜನಧ್ವನಿ ಜಾಥಾ ಆಯೋಜಿಸಿದೆ. (ಎಂ.ಎನ್)