
ಮೈಸೂರು
ಯುವ ಬಳಗ ವತಿಯಿಂದ ಬಸವ ಜಯಂತಿ ಆಚರಣೆ
ಮೈಸೂರು,ಮೇ.14:- ವಿಶ್ವಗುರು ಶ್ರೀ ಬಸವೇಶ್ವರರ ಜಯಂತಿಯ ಅಂಗವಾಗಿ ಮೈಸೂರಿನ ಬಸವೇಶ್ವರ ವೃತ್ತದಲ್ಲಿಂದು ಮೈಸೂರು ಯುವ ಬಳಗ ವತಿಯಿಂದ ಬಸವ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ಎಂ ಎನ್ ನವೀನ್ ಕುಮಾರ್ ,ಲಕ್ಷ್ಮೀದೇವಿ ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರಾದ ರೇಣುಕರಾಜ ,ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕರಾದ ಗಿರೀಶ್ , ನರಸಿಂಹರಾಜ ಕ್ಷೇತ್ರ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಲೋಹಿತ್ ,ಯುವ ಬಳಗದ ಕಾರ್ಯದರ್ಶಿ ನವೀನ್ ,ಹರೀಶ್ ನಾಯ್ಡು ಬಸವೇಶ್ವರರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. (ಕೆ.ಎಸ್,ಎಸ್.ಎಚ್)