
ಕರ್ನಾಟಕಪ್ರಮುಖ ಸುದ್ದಿ
ಕೋವಿಡ್ ನಿಂದ ಮೃತಪಟ್ಟ ಎಲ್ಲರ ಮನೆಗಳಿಗೆ ಬಿಜೆಪಿ ಪಕ್ಷದಿಂದ ಭೇಟಿ : ನಳೀನ್ ಕುಮಾರ್ ಕಟೀಲ್
ರಾಜ್ಯ( ಚಾಮರಾಜನಗರ)ಜು.15:- ರಾಜ್ಯದಲ್ಲಿ ಕೋವಿಡ್ ನಿಂದ ಮೃತಪಟ್ಟ ಎಲ್ಲರ ಮನೆಗಳಿಗೆ ಪಕ್ಷದ ವತಿಯಿಂದ ಭೇಟಿ ನೀಡುವ ಬಗ್ಗೆ ಯೋಚಿಸಿರುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಷದ ಪದಾಧಿಕಾರಿಗಳು ಮೃತಪಟ್ಟವರ ಕುಟುಂಬಗಳನ್ನು ಗುರುತಿಸಿ ಸಾಂತ್ವನ ಹೇಳುವ ಜೊತೆಗೆ ಅವರ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಲಿದ್ದಾರೆ ಎಂದರು.
ರಾಜ್ಯ ಬಿಜೆಪಿಯಲ್ಲಿ ನಾಯಕರ್ವದ ಬಗ್ಗೆ ಎಲ್ಲಿಯೂ ಭಿನ್ನಾಭಿಪ್ರಾಯ ಇಲ್ಲ. ಇನ್ನೂ ಎರಡು ವರ್ಷ ಕಾಲ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಕಟೀಲ್ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.