
ಪ್ರಮುಖ ಸುದ್ದಿಮೈಸೂರು
ಕೆಆರ್ ಎಸ್ ನಲ್ಲಿ ಕಾವೇರಿ ಮಾತೆಗೆ ಬಾಗಿನ ಸಮರ್ಪಣೆ : ಸಿಎಂ ಜೊತೆ ಗೋ.ಮಧುಸೂದನ ಬಾಗಿ
ಮಂಡ್ಯ/ಮೈಸೂರು,ನ.2:- ಕರ್ನಾಟಕ ಸರ್ಕಾರ ಜಲಸಂಪನ್ಮೂಲ ಇಲಾಖೆ ಹಾಗೂ ಕಾವೇರಿ ನೀರಾವರಿ ನಿಗಮ ನಿಯಮಿತ ವತಿಯಿಂದ ಇಂದು ಕೃಷ್ಣರಾಜಸಾಗರದ ಶ್ರೀ ಕಾವೇರಿ ಪ್ರತಿಮೆಯ ಬಳಿ ಕೃಷ್ಣರಾಜ ಸಾಗರ ಜಲಾಶಯವು ತುಂಬಿರುವ ಶುಭ ಸಂದರ್ಭದಲ್ಲಿ ಕಾವೇರಿ ಮಾತೆಯ ಪೂಜೆ ಹಾಗೂ ಬಾಗಿನ ಸಮರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಾಗಿನ ಸಮರ್ಪಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂದನ ಅವರು ಉಪಸ್ಥಿತರಿದ್ದು ಬಾಗಿನ ಅರ್ಪಿಸಿದರು.
ಬಳಿಕ ಶಾಸಕರು ಸಂಸದರೊಂದಿಗೆ ಚರ್ಚೆ ಹಾಗೂ ಮುಖ್ಯಮಂತ್ರಿ ಗಳೊಂದಿಗೆ ಆಪ್ತ ಸಮಾಲೋಚನೆ ನಡೆಸಿದರು.