ಸುದ್ದಿ ಸಂಕ್ಷಿಪ್ತ
ಮೇ 20 ರಂದು ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರ ಜಿಲ್ಲಾ ಪ್ರವಾಸ
ರಾಜ್ಯ,(ಮಡಿಕೇರಿ) ಮೇ 19: ಅನಿವಾಸಿ ಭಾರತೀಯ ಸಮಿತಿ ಮಾನ್ಯ ಉಪಾಧ್ಯಕ್ಷರಾದ ಡಾ.ಆರತಿ ಕೃಷ್ಣ ಅವರು ಮೇ 20 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಉಪಾಧ್ಯಕ್ಷರು ಮೇ 20 ರಂದು ಮಧ್ಯಾಹ್ನ 3 ಗಂಟೆಗೆ ಅನಿವಾಸಿ ಭಾರತೀಯ, ಕನ್ನಡಿಗರ ಕಲ್ಯಾಣ ಸಮಿತಿಯ ಕುರಿತು ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಉಪಾಧ್ಯಕ್ಷರ ಆಪ್ತ ಕಾರ್ಯದರ್ಶಿ ಅವರು ತಿಳಿಸಿದ್ದಾರೆ. (ವರದಿ:ಕೆ.ಸಿ.ಐ, ಎಲ್.ಜಿ)