
ಕರ್ನಾಟಕ
ಬೈಕ್ ಮೇಲಿಂದ ಬಿದ್ದು ಯುವತಿ ಸಾವು
ರಾಜ್ಯ(ರಾಯಚೂರು)ಮೇ.25:- ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಮೇಲಿಂದ ಬಿದ್ದು ಯುವತಿಯೋರ್ವಳು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಲಿಂಗಸೂಗೂರು ಹೊರ ವಲಯದಲ್ಲಿ ನಡೆದಿದೆ.
ಮೃತಳನ್ನು ಮುದಗಲ್ ನ ಯುವತಿ ರೇಣುಕಮ್ಮ ಎಂದು ಗುರುತಿಸಲಾಗಿದೆ. ಅಮವಾಸ್ಯೆ ಹಿನ್ನೆಲೆಯಲ್ಲಿ ಗುರುಗುಂಟಾ ಅಮರೇಶ್ವರರ ದಶ೯ನಕ್ಕೆ ಅಕ್ಕ, ತಮ್ಮ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ಬೈಕ್ ಗೆ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.
ಸವಾರ ಎನ್.ಮೌನೇಶ್ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.