
ಕರ್ನಾಟಕ
ನೂರು ಅಡಿ ದಾಟಿದ ಕೆ.ಆರ್.ಎಸ್ ಜಲಾಶಯದ ನೀರಿನ ಮಟ್ಟ
ರಾಜ್ಯ(ಮಂಡ್ಯ)ಸೆ.4:- ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆ.ಆರ್.ಎಸ್ ಜಲಾಶಯದ ನೀರಿನ ಮಟ್ಟ ನೂರು ಅಡಿ ದಾಟಿದೆ.
124.80 ಗರಿಷ್ಟ ಅಡಿ ಎತ್ತರದ ಕೆ.ಆರ್.ಎಸ್. ಜಲಾಶಯದಲ್ಲಿ ಕಳೆದ ಮೂರು ವರ್ಷಗಳಿಂದ ನೀರಿಲ್ಲದೆ ಜಿಲ್ಲೆಯ ಜನರು ಸಂಕಷ್ಟ ಪಡುತ್ತಿದ್ದರು. ಈ ಬಾರಿ ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಜಲಾಶಯ ತುಂಬವ ನಿರೀಕ್ಷೆಯಿದೆ.ಜಲಾಶಯದ ನೀರಿನ ಮಟ್ಟ ನೂರರ ಗಡಿ ದಾಟುತ್ತಿದ್ದಂತೆ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿದೆ. (ಕೆ.ಎಸ್,ಎಸ್.ಎಚ್)